Tuesday, April 9, 2013

ಕ್ಷೇತ್ರದ ಬದಲಾವಣೆಗೆ ಪ್ರದೀಪಗೌಡರಿಗೆ ಬೆಂಬಲಿಸಿ: ಭೂಮರೆಡ್ಡಿ


ಕೊಪ್ಪಳ,ಏ,೦೯: ಕ್ಷೇತ್ರದ ಸಂಪೂರ್ಣ ಬದಲಾವಣೆಗೆ ಅಭಿವೃದ್ಧಿ ಹರಿಕಾರ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್ ರವರಿಗೆ ಬೆಂಬಲಿಸುವಂತೆ ಜೆಡಿಎಸ್  ಪಕ್ಷ ಹಿರಿಯ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶ ಭೂಮರೆಡ್ಡಿ ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ಮಂಗಳವಾರ ನಗರದ ಹೊಸಪೇಟೆ ರಸ್ತೆಯ ಕಾರ್ಗೀಲ್ ಪೆಟ್ರೋಲ್ ಬಂಕ್ ಪಕ್ಕದ ಕವಲೂರು ಲೇಔಟ್‌ನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನೂತನ ಪ್ರಚಾರ ಕಾರ್ಯಾಲಯದ ರಿಬ್ಬನ್ ಕಟ್ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. s
ಮುಂದುವರೆದು ಮಾತನಾಡಿ, ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್‌ರವರಿಗೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಬೆಂಬಲಿಸಿ ಕ್ಷೇತ್ರದಲ್ಲಿ ಬದಲಾವಣೆ ತರಲು ತಾವೇಲ್ಲಾ ಸಹಕರಿಸಬೇಕು. ಪಕ್ಷದ ಪ್ರಾಮಾಣಿಕ ಕಾರ್ಯಕರ್ತರು ತಮ್ಮ ಕ್ಷೇತ್ರಲ್ಲಿಯೇ ಬಿಡುಬಿಟ್ಟು ಪಕ್ಷ ಸಂಘಟನೆಗೆ ಮುಂದಾಬೇಕೆಂದರು. 
ನಂತರ ಅಭ್ಯರ್ಥಿ ಪ್ರದೀಪ್ ಗೌಡ ವಿ. ಮಾಲಿ ಪಾಟೀಲ್ ಮಾತನಾಡಿ, ಕ್ಷೇತ್ರದ ಜನತೆಯ ನಿಸ್ವಾರ್ಥ ಸೇವಾ ಮನೋಭಾವದಿಂದ ರಾಜಕಾರಣಕ್ಕೆ ಬಂದಿದ್ದು ಕ್ಷೇತ್ರದ ಅಭಿವೃದ್ದಿಗಾಗಿ ಈ ಬಾರಿ  ಜನತೆ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬದಲಾವಣೆಯನ್ನು ತರಬೇಕಿದೆ ಎಂದರು.
 ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಮುಝಾಫರ್ ಷಾ, ರಾಜ್ಯ ಸಂಘಟನಾ ಉಪಾದ್ಯಕ್ಷ ಆರ್. ವಹೀದ್ ಅಹಮ್ಮದ್ ಷಾಹ್, ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ,,ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಮಿನಾಕ್ಷಮ್ಮ ಬನ್ನಿಕೊಪ್ಪ, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಮಹೆಮುದ್ ಹುಸೇನಿ,  ಸಿದ್ದೇಶ್ ದದೇಗಲ್,ಶಿವರಾಮ್ ಗಬ್ಬೂರ,ಕೋಟ್ರಪ್ಪ ಕೋರ್ಲಳ್ಳಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಇದೇ ವೇಳೆ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ ನೂರಾರು ಜನ ವಿವಿಧ ಪಕ್ಷ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. 

0 comments:

Post a Comment