ಕೊಪ್ಪಳ, ಏ.೧೬: ಸಮೀಪದ ಭಾಗ್ಯನಗರ ಗ್ರಾಮದ ೧ ನೇ ವಾರ್ಡಿನ ಕಲಾವತಿ ಪವಾರ, ಲಕ್ಷ್ಮವ್ವ ಮುದೇನಗುಡಿ ಹಾಗೂ ಸರೋಜಮ್ಮ ಹನುಮಂತಪ್ಪ ತಟ್ಟಿ ಯವರ ನೇತೃತ್ವದ ಸ್ತ್ರೀ ಶಕ್ತಿ ಗುಂಪುಗಳ ನೂರಾರು ಮಹಿಳೆಯರು ಮಂಗಳವಾರ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ,ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್ಮಹಾಂತಯ್ಯನಮಠ್, ಕೋಟ್ರಪ್ಪ ಕೋರ್ಲಳ್ಳಿ, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಎಂ. ಹುಸೇನಿ, ಟಿ.ಟಿ. ಪಾಟೀಲ್, ಸಿದ್ದಾರಡ್ಡಿ ಡಂಬ್ರಳ್ಳಿ, ಇಸೂಫ್ಖಾನ್, ಹನುಮಂತಪ್ಪ ಹೀರೆಸಿಂದೋಗಿ, ಪಿ.ಆರ್. ಚಿಗರಿ, ದೇವೆಂದ್ರಪ್ಪ, ಭಾಗ್ಯನಗರದ ಲಕ್ಷ್ಮಣ ಜಾಣ, ಪಾಂಡುರಂಗ ಜಾಣ, ಮಲ್ಲಿಕಾರ್ಜುನ ಎಸ್., ಮಂಜುನಾಥ ಶ್ಯಾವಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ, ಸೇರಿದಂತೆ ಪಕ್ಷದ ಅನೇಕ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
0 comments:
Post a Comment