Tuesday, April 30, 2013

ಜೆಡಿಎಸ್‌ನ ಬೃಹತ್ ರೋಡ್ ಶೋ



ತಾಲೂಕಿನ ಮುನಿರಾಬಾದ್ ಗ್ರಾಮದ ಜಾಮೀಯಾ ಮಸೀದಿ ಮುಖ್ಯರಸ್ತೆಯಲ್ಲಿ ಮಂಗಳವಾರ ಜೆಡಿಎಸ್‌ನ ಬೃಹತ್ ರೋಡ್ ಶೋ ಮೂಲಕ ಬಹಿರಂಗ ಪ್ರಚಾರ ನಡೆಸಲಾಯಿತು.
ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ವಿ.ಮಾಲಿ ಪಾಟೀಲ್, ಪಕ್ಷ ಮುಖಂಡರಾದ ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿ.ಹೆಚ್. ರಮೇಶ, ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಎಸ್.
ಸಿ. ಘಟಕದ ಜಿಲ್ಲಾಧ್ಯಕ್ಷ ಹನುಮೇಶ ಕಡೆಮನಿ, ತಾಲೂಕಾಧ್ಯಕ್ಷ ರಮೇಶ ಬೇಳೂರು, ರಮೇಶ ಹದ್ಲಿ, ಸ್ಥಳೀಯ ಮುಖಂಡರಾದ ಪ್ರದೀಪಕುಮಾರ, ಸುರೇಂದ್ರ, ನರಸಾರೆಡ್ಡಿ, ಮುನಿರ್ ಹೈಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಲೂಟಿ, ಭ್ರಷ್ಟಾಚಾರವೇ ಕಾಂಗ್ರೆಸ್ ಮತ್ತು ಬಿಜೆಪಿ ಕೊಡುಗೆ :ಮೋತಿಲಾಲ್


ಕೊಪ್ಪಳ, ಏ.೩೦: ಕೇಂದ್ರದಲ್ಲಿ ಕಾಂಗ್ರೆಸ್ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬಾರಿ ಭ್ರಷ್ಟಾಚಾರ ಲೂಟಿ ನಡೆಸಿರುವುದೇ ಜನತೆಗೆ ನೀಡಿದ ಕೊಡುಗೆಯಾಗಿದೆ ಎಂದು ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್ ಕಿಡಿಕಾರಿದರು.
ಅವರು ಮಂಗಳವಾರ ತಾಲೂಕಿನ ಹೀರೆ ಕಾಸನಕಂಡಿ ಗ್ರಾಮದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಇಗಾಗಲೇ ಹಲವು ಸಚಿವರು, ಶಾಸಕರು ಜೈಲಿಗೆ ಹೋಗಿಬಂದಿದ್ದಾರೆ ಅದೇ ರೀತಿ ಇನ್ನು ಕೋಟ್ ಕಟಕಟೆಯ
ಲ್ಲಿ ನಿಂತವರು ಇದ್ದಾರೆ. ಜನತೆ ಇನ್ನಾದರು ಎಚ್ಛೆತ್ತು ಯೋಗ್ಯ ಅಭ್ಯರ್ಥಿ ಅದು ನಮ್ಮ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ಮಾಲಿ ಪಾಟೀಲ್ ಕವಲೂರಗೌಡ್ರ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದು ಅವರಿಗೆ ತಮ್ಮ ಮಿಸಲಾಗಿರಲಿ ಎಂದು ಅವರಿಲ್ಲಿ ಮನವಿ ನೀಡಿದರು.
ನಂತರ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಹನುಮೇಶ ಕಡೆಮನಿ ಮಾತನಾಡಿ, ಜನತೆ ಜಾತಿ ಭೇದ ಮಾಡದೇ ಜ್ಯಾತ್ಯಾತೀತವಾಗಿ ಜೆಡಿಎಸ್‌ಗೆ ಬೆಂಬಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷ ಮುಖಂಡರಾದ ಜೆಡಿಎಸ್ ಯುವ ಘಟಕ ಜಿಲ್ಲಾಧ್ಯಕ್ಷ ಸಿ.ಹೆಚ್. ರಮೇಶ, ತಾಲೂಕ ಘಟಕದ ಕಾರ್ಯದರ್ಶಿ ಕಳಕನಗೌಡ ಹಲಗೇರಿ, ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಜೆಡಿಎಸ್ ತಾಲೂಕ ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ, ಕರವೇ ತಾಲೂಕಾಧ್ಯಕ್ಷ ವಿಜಯಕುಮಾರ,  ಪಕ್ಷದ ಎಸ್‌ಸಿ ಘಟಕದ ತಾಲೂಕಾಧ್ಯಕ್ಷ ರಮೇಶ ಬೇಳೂರು, ವಿರುಪಾಕ್ಷಗೌಡ, ರಮೇಶ ಹದ್ಲಿ, ಸೋಮಶೇಖರ, ದೇವಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ:ವಿಜಯಕುಮಾರ



ಕೊಪ್ಪಳ, ಏ.೩೦: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೇ ಈ ಬಾರಿ ರಾಜ್ಯದ ಮುಖ್ಯಮಂತ್ರಿಯಾಲಿದ್ದಾರೆ ಎಂದು ಕರವೇ ತಾಲೂಕಾಧ್ಯಕ್ಷ ವಿಜಯಕುಮಾರ ಭವಿಷ್ಯ ನುಡಿದರು.
ಅವರು ಮಂಗಳವಾರ ತಾಲೂಕಿನ ಹೀರೆ ಕಾಸನಕಂಡಿ ಗ್ರಾಮದ ಹರಿಜನ ಕೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ನಮ್ಮ ಜೆಡಿಎಸ್ ಅಭ್ಯರ್ಥಿ ಪ್ರದೀಪಗೌಡ ಮಾಲಿ ಪಾಟೀಲ್ ಕವಲೂರಗೌಡ್ರ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದು ನಮ್ಮ ಸಮಾಜದ ಜನತೆ ಸಾಕಷ್ಟು ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ. ನಮ್ಮೆಲ್ಲಾ ಸಮಾಜದ ಹಾಗೂ ಸಂಬಂಧಿತರ ಮತಗಳು ಜೆಡಿಎಸ್ ಪಕ್ಷಕ್ಕೆ ಮಿಸಲಾಗಿರಲಿ ಎಂದು ಅವರಿಲ್ಲಿ ಕರೆ ನೀಡಿದರು. 
ಕುಮಾರಸ್ವಾಮಿಯವರ ಜನಪರ ಕಾರ್ಯಗಳನ್ನು ಗೌಡರು ನಮ್ಮ ಮನೆ ಬಾಗಿಲಿಗೆ ತಂದು ತಲುಪಿಸಲಿದ್ದಾರೆ. 
ಇದೇ ವೇಳೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ ಎಲ್ಲಾ ಸಮಾಜದರಿಗೆ ಪ್ರೋತ್ಸಾಹ ಹಾಗೂ ಸೂಕ್ತ ಸ್ಥಾನಮಾನ ನೀಡಿದೆ ಅದರಂತೆ ಮುಂದೆಯೂ ಪಕ್ಷದ ನಿಷ್ಠಾವಂತರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದರು.
ಸೇರ್ಪಡೆ: ಗುಡದಪ್ಪ, ಬಸವರಾಜ, ನಿಂಗಪ್ಪ, ಸಣ್ಣ ನಿಂಗಪ್ಪ, ಮಂಜುನಾಥ, ರೇವಪ್ಪ, ಭೀಮಪ್ಪ, ಪಕೀರಪ್ಪ, ಜುಂಜಪ್ಪ, ಸಿದ್ದಪ್ಪ ಚೇರಮನ್ ಸೇರಿದಂತೆ ಅನೇಕ ದಲಿತ ಮುಖಂಡರು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
 ಈ ಸಂದರ್ಭದಲ್ಲಿ ಪಕ್ಷ ಮುಖಂಡರಾದ ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಹನುಮೇಶ ಕಡೆಮನಿ, ತಾಲೂಕಾಧ್ಯಕ್ಷ ರಮೇಶ ಬೇಳೂರು, ವಿರುಪಾಕ್ಷಗೌಡ, ರಮೇಶ ಹದ್ಲಿ, ಸೋಮಶೇಖರ, ದೇವಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Sunday, April 28, 2013

ಮಾದರಿ ಮತಪೆಟ್ಟಿಗೆಯಿಂದ ಮತದಾನದ ಪ್ರಾತ್ಯಕ್ಷಿಕೆ


ಕೊಪ್ಪಳ, ಏ.೨೮: ತಾಲೂಕಿನ ಓಜನಹಳ್ಳಿ ಗ್ರಾಮ ಸೇರಿದಂತೆ ಕೋಳೂರು, ನೇರೆಗಲ್,ಚಿಲವಾಡಗಿ ಹಟ್ಟಿ, ಮಾದಿನೂರು, ಯತ್ನಟ್ಟಿಯ ಗ್ರಾಮೀಣ ಜನತೆಗೆ ಕೊಪ್ಪಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮಾದರಿ ಮತಪೆಟ್ಟಿಗೆ ಮೂಲಕ ಮತದಾನದ ಪ್ರಾತ್ಯಕ್ಷಿಕೆ ಮೂಲಕ ಜನತೆಗೆ ಮತದಾನ ಕುರಿತು ತಿಳಿಯಪಡಿಸಿದರು.
ಗ್ರಾಮೀಣದ ಜನತೆಗೆ ಹೇಳಿದ್ದಲ್ಲದೇ ಪ್ರಾತ್ಯಕ್ಷಿಕೆಯಿಂದಲೂ ತಿಳಿಯಪಡಿಸಿದಾಗ ಮಾತ್ರ ತಿಳಿಯುತ್ತದೆ ಎಂದರು. ಮೇಲಿನಿಂದ ಕ್ರಮ ಸಂಖ್ಯೆ ೨ ಪ್ರದೀಪ ವಿರುಪಾಕ್ಷಗೌಡ ಪಾಟೀಲ್ ಭತ್ತದ ಹೊರೆ ಹೊತ್ತ ಮಹಿಳೆಯ ಚಿನ್ನೆಗೆ ಗುರುತು ಗುರಿತಿಸಿ ಮತದಾನ ಮಾಡುವಂತೆ ಅವರಿಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್ ಮಾಸ್ಟರ್, ಗಾಳೆಪ್ಪ ಕಡೆಮನಿ, ಹನುಮೇಶ, ರಮೇಶ, ಬಸಪ್ಪ, ವಿರುಪಾಕ್ಷಗೌಡ, ಪ್ರಭು ಬಬ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಂಗ್ರೆಸ್- ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು: ಎಂ.ವಿ. ಪಾಟೀಲ್



ಕೊಪ್ಪಳ, ಏ.೨೭: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಒಂದೇ ನಾಣ್ಯದ ಏರಡು ಮುಖಗಳು ಅವರ ಅಭಿವೃದ್ಧಿ ಕಾರ್ಯಗಳನ್ನು ಕಳೆದ ೩೦ ವರ್ಷಗಳಿಂದ ಕ್ಷೇತ್ರದ ಜನತೆ ಕಂಡಿದ್ದೀರಿ ಅವರದು ಹೊಂದಾಣಿಕೆಯ ರಾಜಕೀಯ, ಅಧಿಕಾರದ ವ್ಯಾಮೋಹದವರು. ಗೌಡ್ರ ಅಧಿಕಾರ ರಾಜಕೀಯಕ್ಕಾಗಿ ಚುನಾವಣೆಗೀಳಿದಿಲ್ಲ, ಜನರ ಸೇವೆಗಾಗಿ ಅವಕಾಶ ಬೇಡಿ ಬಂದಿದ್ದಾರೆ

ಎಂದು ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ವಿ. ಪಾಟೀಲ್ ಹೇಳಿದರು.
ಅವರು ಶನಿವಾರ ತಾಲೂಕಿನ ಹೀರೆಸಿಂದೋಗಿ ಗ್ರ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಮತದಾನದ ಎರಡು ದಿನ ಮುಂಚೆಯೇ ಜನರಿಗೆ ದುಡ್ಡು ಕೊಟ್ಟು ಬದಲಾಯಿಸಬಹುದೆಂದು ಅವರು ನಂಬಿದ್ದಾರೆ ಆದರೆ ಈ ಬಾರಿ ಮತದಾರರು ಅದನ್ನು ಸುಳ್ಳಾಗಿಸಬೇಕು. ಕ್ಷೇತ್ರದ ಪೂರ್ವಭಾಗದ ಮುಖಂಡರಿಗೆ ಮನ್ನಣೆ ನೀಡಿ ಅಧಿಕಾರ ನೀಡಿದ್ದೇವೆ ಆದರೆ ಈ ಬಾರಿಯಾದರೂ ಕ್ಷೇತ್ರದ ಪಶ್ಚಿಮ ಭಾಗದ ನಮ್ಮ ಗೌಡರಿಗೆ ಬೆಂಬಲಿಸಿ ಈ ಭಾಗದ ಅಭಿವೃದ್ಧಿಗೆ ಬೆಂಬಲಿಸಬೇಕೆಂದು ಅವರಿಲ್ಲಿ ಮನವಿ ಮಾಡಿದರು.
ಜೆಡಿಎಸ್ ಪಕ್ಷ ತಾಲೂಕ ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ ಮಾತನಾಡಿ, ಇಲ್ಲಿಯವರೆಗೂ ಎಲ್ಲರಿಗೆ ದುಡಿದು ಸಾಕಾಗಿದೆ. ಅವರಿಂದ ಅಭಿವೃದ್ಧಿ ನೆಪದಲ್ಲಿ ತಮ್ಮ ಅಭಿವೃದ್ಧಿಯೇ ಹೆಚ್ಚಾಗಿದೆ. ತಮ್ಮ ಕುಟುಂಬ, ಬಂಧುಭಾಂದವರ ಅಭಿವೃದ್ಧಿಯಾಗಿದೆ ಆದರೆ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ, ಅಲ್ಲದೇ ಅವರ ಬೆನ್ನಹಿಂದೆ ಯಾರನ್ನುಬೆಳೆಸಿಲ್ಲ. ಅಧಿಕಾರ ತಮ್ಮ ಕುಟುಂಬಕ್ಕೆ ಮಿಸಲಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ ಇದನ್ನು ಜನತೆ ಅರಿತು ನಿರ್ಧಾರ ಕೈಗೊಂಡು ಜೆಡಿಎಸ್‌ಗೆ ಬೆಂಬಲಿಸುವಂತೆ ಕೋರಿದರು.
ಇದೇ ವೇಳೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮಾತನಾಡಿ, ಈ ಭಾಗದ ಜನರ ಅಭಿಮಾನ ಮತದಾನವಾಗಿ ಪರಿವರ್ತನೆಗೊಳ್ಳಲಿ ಮತದಾನದ ಮಹತ್ವ ಅರಿತು ಮತದಾನ ಮಾಡಿ ಸುಳ್ಳು ಭರವಸೆ, ಆಮಿಷಗಳಿಗೆ ಓಳಗಾಗಬೇಡಿ ಎಂದು ಕಿವಿ ಮಾತು ಹೇಳಿದರು. 
ಅದ್ದುರಿ ಸ್ವಾಗತ: ಹೀರೆಸಿಂದೋಗಿ ಗ್ರಾಮಕ್ಕೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಗ್ರಾಮಕ್ಕೆ ಆಗಮಿಸುತ್ತಿದಂತೆ ಗ್ರಾಮದ ಜನತೆ ಅಭಿಮಾನಿಗಳು ಪಟಾಕಿ ಸೀಡಿ ವಿವಿಧ ಘೋಷಣೆಗಳನ್ನು ಕುಗುತ್ತಾ ಅದ್ಧೂರಿಯಾಗಿ ಸ್ವಾಗತಿಸಿದರು. 

Friday, April 26, 2013

ಬಣ್ಣದ ಮಾತಿಗೆ, ಸುಳ್ಳು ಭರವಸೆಗಳಿಗೆ ಮಾರು ಹೋಗಬೇಡಿ: ಲಕ್ಷಾಣಿ





ಕೊಪ್ಪಳ, ಏ.೨೬: ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಸುಳ್ಳು ಭರವಸೆ, ಬಣ್ಣದ ಮಾತುಗಳಿಂದ ಜನತೆಯನ್ನು ಮರುಳು ಮಾಡಿದ್ದಾರೆ. ಇನ್ನಾದರೂ ಜನತೆ ಬದಲಾವಣೆಗೆ ಮುಂದಾಗಿ, ಅವರಿಬ್ಬರಿಗೆ ಕ್ಷೇತ್ರವನ್ನು ಅಗ್ರಿಮೆಂಟ್ ಮಾಡಿಕೋಡದಿರಿ ಕ್ಷೇತ್ರದ ಬದಲಾವಣೆ ಮುಂದಾಗಿ ಎಂದು ಜೆಡಿಎಸ್ ತಾಲೂಕು ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ ಜನತೆಗೆ ಕರೆ ನೀಡಿದರು. 
ಅವರು ಗುರುವಾರ ತಾಲೂಕಿನ ಬಿಕನಳ್ಳ್ಳಿ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಭ್ರಷ್ಟಾಚಾರದಲ್ಲಿ ಬಿಜೆಪಿ, ಅಧಿಕಾರ ವ್ಯಾಮೋಹದಲ್ಲಿ ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ತಮ್ಮದೆಯಾದ ದುರುದ್ದೇಶಗಳಿಂದ ಗುರುತಿಸಿಕೊಂಡಿದ್ದು, ಜೆಡಿಎಸ್‌ನ ಕವಲೂರು ಗೌಡ್ರ ಮಾತ್ರ ನಿಶ್ಕಳಂಕಿತ ವ್ಯಕ್ತಿಯಾಗಿದ್ದು, ಹೆಸರಾಂತ ಮನೆತನದಿಂದ ಬಂದವರು ಎಂದು ಅವರು ಸಣ್ಣತನದ ವ್ಯಕ್ತಿತ್ವ ತೋರಿದವರಲ್ಲವೆಂದರು. ಜೆಡಿಎಸ್‌ನಿಂದ ಮಾತ್ರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಅಲ್ಲದೇ ಗೌಡ್ರು ನುಡಿದಂತೆ ನೆಡೆಯುವ ವ್ಯಕ್ತಿಯಾಗಿದ್ದಾರೆ ಎಂದರು.
ಹೊಸಮುಖ, ಹೊಸತನದ ಕ್ಷೇತ್ರದ ಬಗ್ಗೆ ಕಳಕಳಿಯುಳ್ಳವರಿಗೆ ಕವಲೂರು ಗೌಡ್ರರಿಗೆ ನಿಮ್ಮ ಮತ ಮಿಸಲಾಗಿರಲಿ ಎಂದು ಜೆಡಿಎಸ್ ಪಕ್ಷದ ಮುಖಂಡ ಟಿ.ಟಿ. ಪಾಟೀಲ್ ಹೇಳಿದರು. ನಮ್ಮನ್ನು ಓಟ್ ಬ್ಯಾಂಕ್‌ನ್ನಾಗಿಸಿಕೊಂಡ ಕಾಂಗ್ರೆಸ್‌ಗೆ ಮತ್ತು ಬಣ್ಣದ ಮಾತಿನ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದ ಸಮಾಜ ಬಾಂಧವರು ಈ ಬಾರಿ ಜೆಡಿಎಸ್ ಸರಳ ಸಜ್ಜನಿಕೆಯ ಕೊಡುಗೈದಾನಿ ಪ್ರದೀಪಗೌಡ್ರಗೆ ಇದೊಂದು ಬಾರಿ ಬೆಂಬಲಿಸಿ ಬಹುಮತದಿಂದ ಜಯಗಳಿಸಲು ತಾವೇಲ್ಲಾ ಆಶೀರ್ವದಿಸಬೇಕೆಂದರು. 
ಇದೇ ವೇಳೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಮಾತನಾಡಿ, ಈ ಭಾಗದ ಜನರ ಅಭಿಮಾನ ಮತದಾನವಾಗಿ ಪರಿವರ್ತನೆಗೊಳ್ಳಲಿ ಮತದಾನದ ಮಹತ್ವ ಅರಿತು ಮತದಾನ ಮಾಡಿ ಸುಳ್ಳು ಭರವಸೆ, ಆಮಿಷಗಳಿಗೆ ಓಳಗಾಗಬೇಡಿ ಎಂದು ಕಿವಿ ಮಾತು ಹೇಳಿದರು. 
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ, ಮಾಜಿ ಜಿ.ಪಂ. ಸದಸ್ಯ ಮೋತಿಲಾಲ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷರುಗಳಾದ ಎಂ.ವಿ. ಪಾಟೀಲ್, ನಿಲಕಂಠಯ್ಯ ಹಿರೇಮ ಠ, ನಗರಸಭೆ ಮಾಜಿ ಸದಸ್ಯ ಈರಣ್ಣ ಹಂಚಿನಾಳ ಹಾಗೂ ಹಿರಿಯರಾದ ಹಲಗೇರಿ ಬಸವರಾಜಪ್ಪ, ತಾಲ್ಲೂಕಾಧ್ಯಕ್ಷ ಅಂದಪ್ಪ ಮರೇಬಾಳ, ಕಾರ್ಯದರ್ಶಿ ಶೇಖಪ್ಪ ಲಕ್ಷಾಣಿ, ಎಸ್. ಟಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ರಮೇಶ ವಣಬಳ್ಳಾರಿ, ಪಕ್ಷದ ಮುಖಂಡರಾದ ವಿರೇಶ್‌ಮಹಾಂತಯ್ಯನಮಠ್, ರಾಜು ಹಲಗೇರಿ, ಕೋಟ್ರಪ್ಪ ಕೋರ್ಲಳ್ಳಿ, ಎಂ.ಡಿ.ಹುಸೇನ ಮಾಸ್ಟರ್, ನಗರ ಸಭೆ ಸದಸ್ಯರಾದ ಚನ್ನಪ್ಪ ಕೋಟ್ಯಾಳ್, ಖಾಜಾವಲಿ ಬನ್ನಿಕೊಪ್ಪ, ನಗರ ಯುವ ಘಟಕದ ಅಧ್ಯಕ್ಷ ಸೈಯದ್ ಎಂ.ಹುಸೇನಿ, ಟಿ.ಟಿ. ಪಾಟೀಲ್, ಸಿದ್ದಾರಡ್ಡಿ ಡಂಬ್ರಳ್ಳಿ, ಇಸೂಫ್‌ಖಾನ್, ಹನುಮಂತಪ್ಪ ಹೀರೆಸಿಂದೋಗಿ, ರಮೇಶ ಹದ್ಲಿ, ಶಂಕರ ಗೆ ಜ್ಜಿ, ದೇವೆಂದ್ರಪ್ಪ, ಭಾಗ್ಯನಗರದ ಮಂಜುನಾಥ ಶ್ಯಾವಿ, ಮಂಜುನಾಥ್ ಗಡ್ಡದ್, ವೆಂಕಟೇಶ ಬೆಲ್ಲದ್, ಅಮರೇಶ ಮುರುಳಿ, ವಿಜಯಕುಮಾರ ಬಿಸರಳ್ಳಿ, ಪ್ರಭು ಬಬ್ಲಿ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Monday, April 22, 2013

ವೈಯುಕ್ತಿಕ ಮಾಹಿತಿ

ಪ್ರದೀಪ್

ತಂದೆ  : ವಿರುಪಾಕ್ಷಗೌಡ  ಮಾಲೀಪಾಟೀಲ್

ತಾಯಿ : ಅನ್ನಪೂರ್ಣಾದೇವಿ

ಜನ್ಮದಿನಾಂಕ : 4-7-1967

ವಿದ್ಯಾರ್ಹತೆ : ಡಿಪ್ಲೋಮಾ ಇನ್ ಅಟೋಮೊಬೈಲ್ಸ್

ಪತ್ನಿ : ಮಲ್ಲಮ್ಮ

ಮಕ್ಕಳು : ಸುಚಿತ್ , ವಿಶಾಲ್

ವೃತ್ತಿ :  ವ್ಯವಸಾಯ

ಕೊಪ್ಪಳ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ದೆ  (ಪಡೆದ ಮತಗಳು 20719)